Apartha kosha

ದೆವ್ವಲಪರ್ ಅಂಡ್ ಬಿಳ್ಡರ್, ಪೀಕಲಾಟ, ಸಮರ್ಥನೆ, ಸೊಪ್ಪಿನರಸ, ಸಾಲಿಯಾನ, ಸಾಲಿಯಾನಿ, ಬಿರಿಯಾನಿ

June 18, 2008 · 2 Comments

ದೆವ್ವಲಪರ್ ಅಂಡ್ ಬಿಳ್ಡರ್ : ಭೂತ ಬಂಗಲೆಗಳನ್ನು ಕಟ್ಟಡಗಳನ್ನೂ ದೆವ್ವ ಹಿಡಿದಂತೆ ಕಟ್ಟುವಾತ, ಬಾಡಿ ಬಿಲ್ಡರ್‌ಗಳನ್ನು ಹೊಂದಿ ಕೆಲಸ ಮಾಡಿಸುವಾತ

 

ಪೀಕಲಾಟ :Peak hourನಲ್ಲಿ ಪರದಾಟ

 

ಸಮರ್ಥನೆ : ಪ್ರಶ್ನೆಗೆ ಮರುಪ್ರಶ್ನೆ ಹಾಕುವ ಕಾಯಕ

 

ಸೊಪ್ಪಿನರಸ : ವಾಕಿಂಗ್ ಆದಮೇಲೆ ಸೊಪ್ಪಿನ ರಸವನ್ನು ಕುಡಿದು ಬೀಗುವ ರಾಜರು..!

 

ಬಿರಿಯಾನಿ : ಹೊಟ್ಟೆ ಬಿರಿಯೋ ಹಾಗೆ “ಬಿರಿಯಾನ” ಕೈಗೊಳ್ಳುವಾತ

 

ಸಾಲಿಯಾನ : ಸಾಲಿಗೆ ಹೋಗುವ ಕಾಯಕ, ಸ್ಕೂಲ್ ಯಾತ್ರೆ(ತಾ-ಪತ್ರೆ)..!

 

ಸಾಲಿಯಾನಿ : ಶಾಲಾಬಾಲಕ(ಕಿ)

 

ಸಾಂಗ್ಲಿಯಾನ : ಸಾಂಗ್ಲಿಗೆ ಯಾತ್ರೆ

Categories: Blogroll
Tagged: , , , , , , , ,

2 responses so far ↓

  • minchulli // March 2, 2009 at 6:21 am

    ನಮಸ್ತೆ.. ಅಮ್ಮನ ಹಬ್ಬಕ್ಕೆ ಆಮಂತ್ರಿಸಲು ನಿಮ್ಮ ಮನೆಗೆ ಬಂದೆ.. ದಯವಿಟ್ಟು ಬಿಡುವು ಮಾಡಿಕೊಂಡು ಬನ್ನಿ.. ವಿವರಗಳಿಗೆ ನನ್ನ ಬ್ಲಾಗ್ http://minchulli.wordpress.com ನೋಡಿ. ಮರೆಯದೆ ಬನ್ನಿ… ನಿಮ್ಮ ಆಪ್ತರಿಗೆಲ್ಲ ಈ ವಿಚಾರ ಹೇಳಿ ಸಾಧ್ಯವಾದರೆ ಕರೆದುಕೊಂಡು ಬನ್ನಿ.

    ವಂದೇ,
    - ಶಮ, ನಂದಿಬೆಟ್ಟ

  • ಮಣಿಕಾಂತ್ // April 16, 2009 at 5:06 am

    ಪ್ರಿಯ ಗಣೇಶ್ ಜಿ

    ನನ್ನ ಹೊಸ ಪುಸ್ತಕ ‘ಅಮ್ಮ ಹೇಳಿದ ಎಂಟು ಸುಳ್ಳುಗಳು’ ಇದೇ ಏಪ್ರಿಲ್ ೨೬ರಂದು ಬಿಡುಗಡೆಯಾಗಲಿದೆ.
    ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ, ಬೆಳಗ್ಗೆ ೧೦.೩೦ಕ್ಕೆ ಕಾರ್ಯಕ್ರಮ ಆರಂಭವಾಗಲಿದೆ. ಹೆಸರಾಂತ ಚಿತ್ರನಟ ಶ್ರೀ ಪ್ರಕಾಶ್ ರೈ ಅವರು ಪುಸ್ತಕ ಬಿಡುಗಡೆ ಮಾಡಲಿದ್ದಾರೆ.
    ಅಂದು ನಮ್ಮೊಂದಿಗೆ ಹೆಸರಾಂತ ಕವಿ-ಸಾಹಿತಿಗಳು, ಸಾಂಸ್ಕೃತಿಕ ಲೋಕದ ಗಣ್ಯರು ಹಾಜರಿರುತ್ತಾರೆ. ರಮೇಶ್ಚಂದ್ರ ,ಉಪಾಸನಾ ಮೋಹನ್, ಪಂಚಮ್ ಹಳಿಬಂಡಿ, ಅರ್ಚನಾ ಉಡುಪ, ರಮೇಶ್ಚಂದ್ರ ಮುಂತಾದವರಿಂದ ಮಧುರ ಭಾವಗೀತೆ ಗಾಯನವಿರುತ್ತದೆ.
    ಪುಸ್ತಕ ಬಿಡುಗಡೆಯ ನೆಪದಲ್ಲಿ ಚೆಂದದ ಹಾಡು ಕೇಳೋಣ. ಚತುರ್ಭಾಷಾ ಕಲಾವಿದ ಪ್ರಕಾಶ್ ರೈ ಅವರ ಅದ್ಭುತದ್ಭುತ ಎಂಬಂಥ ಮಾತುಗಳಿಗೆ ಕಿವಿಯಾಗೋಣ.
    ನೆಪ ಹೇಳಬೇಡಿ : ದಯವಿಟ್ಟು ಬನ್ನಿ.
    ಸ್ಥಳ: ರವೀಂದ್ರ ಕಲಾಕ್ಷೇತ್ರ.
    ಸಮಯ: ಬೆಳಗ್ಗೆ ೧೦.೩೦.
    ದಿನಾಂಕ: ಏಪ್ರಿಲ್ ೨೬, ಭಾನುವಾರ

Leave a Comment